ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯಾರು? | Oneindia Kannada

  • 6 years ago
ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ ತುಮಕೂರಿನಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಜಿ.ಬಿ.ಜ್ಯೋತಿ ಗಣೇಶ್ ನಡುವೆ ಅಸಮಾಧಾನವಿದೆ. ಚುನಾವಣೆ ಮೇಲೆ ಇದು ಪರಿಣಾಮ ಬೀರದಂತೆ ಸಂಧಾನ ಸೂತ್ರವನ್ನು ಪಕ್ಷ ಸಿದ್ಧಪಡಿಸಿದೆ.

ಪರಿವರ್ತನಾ ಯಾತ್ರೆ ಮುಗಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ್ದ ಸೊಗಡು ಶಿವಣ್ಣ ಅವರು, 'ತುಮಕೂರು ಜಿಲ್ಲೆಯ ಬಿಜೆಪಿ ಅಪ್ಪ-ಮಕ್ಕಳಿಂದ ಬೆಳೆದಿಲ್ಲ. ನಾವು ಪಕ್ಷವನ್ನು ಕಟ್ಟಿ ಬೆಳೆಸಿದ್ದೇವೆ. ಪಕ್ಷದ ಕಾರ್ಯಕರ್ತರನ್ನು ಬಿಟ್ಟು ಎಂದು ಕೆಲಸ ಮಾಡು ಎಂದರೆ ನಾವು ಮಾಡುವುದಿಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ತುಮಕೂರು ನಗರ ಕ್ಷೇತ್ರದಿಂದ ಸೊಗಡು ಶಿವಣ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಜಿ.ಬಿ.ಜ್ಯೋತಿ ಗಣೇಶ್ ಇಬ್ಬರೂ ಟಿಕೆಟ್ ಆಕಾಂಕ್ಷಿಗಳು. ಆದರೆ, ಇವರ ನಡುವಿನ ಅಸಮಧಾನದಿಂದ ಪಕ್ಷಕ್ಕೆ ಸೋಲಾಗಬಾರದು ಎಂದು ಪಕ್ಷದ ನಾಯಕರು ಸಂಧಾನಸೂತ್ರವೊಂದನ್ನು ಸಿದ್ಧಪಡಿಸಿದ್ದಾರೆ.

2013ರ ಚುನಾವಣೆಯಲ್ಲಿ ಕೆಜೆಪಿ, ಬಿಜೆಪಿ ಗೊಂದಲದಿಂದಾಗಿ ಕ್ಷೇತ್ರದಲ್ಲಿ ಮತ ವಿಭಜನೆಯಾಗಿತ್ತು. ಕಾಂಗ್ರೆಸ್‌ನ ಡಾ.ರಫೀಕ್ ಅಹಮದ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.
Sogadu Shivanna, G.B.Jyothi Ganesh who will get BJP ticket in Tumkur city assembly constituency in 2018 assembly elections Karnataka. Dr. Rafeeq Ahmed S (Congress) sitting MLA of the constituency.

Recommended