Skip to playerSkip to main content
  • 2 days ago
ಬೆಂಗಳೂರು: ನಿರ್ಜನ ರಸ್ತೆಯೊಂದರಲ್ಲಿ ಸ್ಕೂಟರ್​ ಸವಾರನನ್ನು ಅಡ್ಡಗಟ್ಟಿ ಸುಲಿಗೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನವೆಂಬರ್ 15ರಂದು ಶಾಂತಿನಗರ ಸಮೀಪದ ಚರ್ಚ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಳಗ್ಗಿನ ಜಾವ 4:30ರ ಸುಮಾರಿಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸವಾರನನ್ನು ಮತ್ತೊಂದು ಸ್ಕೂಟರ್‌ನಲ್ಲಿ ಬಂದ ಮೂವರು ಅಡ್ಡಗಟ್ಟಿದ್ದಾರೆ. ಈ ಪೈಕಿ ಇಬ್ಬರು ಇಳಿದು ಸ್ಕೂಟರ್ ಸವಾರನ ಬಳಿಯಿದ್ದ ಹಣ, ಮೊಬೈಲ್​ ಫೋನ್‌ ದೋಚಲು ಯತ್ನಿಸಿದ್ದಾರೆ. ಆದರೆ ಸ್ಕೂಟರ್ ಸವಾರ ಧೈರ್ಯದಿಂದ ಪ್ರತಿರೋಧವೊಡ್ಡಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಮಾರಕಾಸ್ತ್ರ ಪ್ರದರ್ಶಿಸಿ ಸುಲಿಗೆ ಯತ್ನ(ಪ್ರತ್ಯೇಕ ಘಟನೆ): ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನಿಸಿರುವ ಘಟನೆ ಯಶವಂತಪುರ ರೈಲ್ವೇ ನಿಲ್ದಾಣದ ಬಳಿಯೂ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಬಂದ ಮೂವರು ಕಿಡಿಗೇಡಿಗಳು ನಸುಕಿನ ಜಾವ ಫುಟ್‌ಪಾತ್​ ಮೇಲೆ ಹೋಗುತ್ತಿದ್ದವನಿಗೆ ಮಚ್ಚು ತೋರಿಸಿ, 100 ರೂಪಾಯಿ ಹಣ ಕೇಳಿದ್ದಾರೆ. ಕೊಡದಿದ್ದರೆ ಮಚ್ಚಿನಿಂದ ಹಲ್ಲೆ ಮಾಡುವುದಾಗಿ ಅವಾಚ್ಯವಾಗಿ ನಿಂದಿಸಿದ್ದಾರೆ. ಈ ವೇಳೆ ಪಕ್ಕದಲ್ಲೇ ಸಾಗುತ್ತಿದ್ದ ಮತ್ತೋರ್ವ ವ್ಯಕ್ತಿ ವಿಡಿಯೋ ರೆಕಾರ್ಡ್ ಮಾಡುತ್ತಿರುವುದನ್ನು ಗಮನಿಸಿ ಮಚ್ಚು ಬೀಸಿದ್ದಾರೆ. ಕೂಡಲೇ 'ಪೊಲೀಸ್ ಪೊಲೀಸ್' ಎಂದು ಕೂಗಿಕೊಂಡಾಗ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಪರಿಶೀಲನೆ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.ಇದನ್ನೂ ಓದಿ: ನಾಯಿಯನ್ನು ಮುದ್ದಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ದುರುಳ

Category

🗞
News
Be the first to comment
Add your comment

Recommended