Skip to playerSkip to main content
  • 2 days ago
ಚಿಕ್ಕಮಗಳೂರು: ಹಲವು ದಿನಗಳಿಂದ ಬೀದಿ ನಾಯಿಗಳನ್ನು ಬೇಟೆಯಾಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದೆ. ಬಯಲು ಸೀಮೆ ಪ್ರದೇಶದಲ್ಲಿ ಚಿರತೆ ಹಾವಳಿ ಮಿತಿ ಮೀರಿ ಹೋಗುತ್ತಿದ್ದು, ತರೀಕೆರೆ ಹಾಗೂ ಅಜ್ಜಂಪುರ, ಕಡೂರು ತಾಲೂಕಿನಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿ ಜನರಲ್ಲಿ ಆತಂಕದ ವಾತಾವರಣವನ್ನು ನಿರ್ಮಾಣ ಮಾಡುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಕಡೂರು ತಾಲೂಕಿನ ಬೀರೂರಿನ ಕನಕ ನೀರಿನ ಟ್ಯಾಂಕ್ ಬಳಿ ಚಿರತೆ ಪ್ರತ್ಯಕ್ಷವಾಗಿ ಮನೆಯಲ್ಲಿ ಸಾಕಿದ ನಾಯಿಯನ್ನು ಬೇಟೆಯಾಡಲು ಹೊಂಚು ಹಾಕಿತ್ತು.ಈ ಘಟನೆ ಬೆನ್ನಲ್ಲೇ, ತರೀಕೆರೆ ತಾಲೂಕಿನಲ್ಲಿಯೂ ಇದೇ ರೀತಿ ಚಿರತೆ ನಾಯಿ ಬೇಟೆಯಾಡಿ ಜನರ ನಿದ್ದೆಗೆಡಿಸಿತ್ತು. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ, ಮನವಿ ಮಾಡಿದ್ದರು. ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ.ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಚಿರತೆ ಸೆರೆಯಾಗಿದೆ. ಬೋನಿಗೆ 4 ವರ್ಷದ ಹೆಣ್ಣು ಚಿರತೆಯಾಗಿದ್ದು, ಲಿಂಗದಹಳ್ಳಿ, ಉಡೇವಾ ಸುತ್ತಮುತ್ತ ಹಲವು ದಿನಗಳಿಂದ ಸಂಚಾರ ಮಾಡುತ್ತಿತ್ತು. ಈ ಗ್ರಾಮದಲ್ಲಿ 8ಕ್ಕೂ ಹೆಚ್ಚು ನಾಯಿಗಳನ್ನು ಬೇಟೆಯಾಡುವ ಮೂಲಕ ಚಿರತೆ ಆತಂಕ ಮೂಡಿಸಿತ್ತು. ಚಿರತೆ ಸಂಚಾರದಿಂದ ಆತಂಕಕ್ಕೆ ಒಳಗಾಗಿದ್ದ ಜನ, ಮನೆಯಿಂದ ಹೊರಬರೋದಕ್ಕೂ ಹಿಂದೇಟು ಹಾಕುವಂತಾಗಿತ್ತು.ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯವನ್ನು ಮಾಡಿದ ಬೆನ್ನಲ್ಲೇ, ಅರಣ್ಯ ಇಲಾಖೆ ಸಿಬ್ಬಂದಿಗಳು ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದ್ದ ಜಾಗದಲ್ಲಿ ಬೋನು ಇಟ್ಟಿದ್ದರು. ಚಿರತೆ ಸೆರೆಯಿಂದ ನೆಮ್ಮದಿಯಿಂದ ಗ್ರಾಮದಲ್ಲಿ ಸಂಚಾರ ಮಾಡುವಂತೆ ಆಗಿದೆ.ಇದನ್ನೂ ಓದಿ: ಪಟ್ಟಣಕ್ಕೆ ಬಂದ ಗಜರಾಜ, ಬೈಕ್​ಅನ್ನು ಎತ್ತಿಬಿಸಾಡಿದ: ಕಾಡಿಗಟ್ಟಲು ಅರಣ್ಯ ಇಲಾಖೆಯಿಂದ ಆಪರೇಷನ್

Category

🗞
News
Transcript
00:00My brother, I am a Doer.
00:07I am a Doer.
00:09This time I am going to throw away I am going to ban a doer.
00:18so
00:28right
00:31ok
00:33ok
00:36ok
00:41ok
00:44I'm a hillary, there are many people who want to fire.
00:47I'm a pelser, he's a dorser.
00:50We're out here, we're out here.
00:51The whole family, are being saved.
00:56Do you have two people?
01:00I have two people.
Be the first to comment
Add your comment

Recommended