ಬೆಂಗಳೂರಿನ ವಿಜಯನಗರದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಹೈಟೆಕ್ ಅಂಡರ್ ಗ್ರೌಂಡ್ ಮಾರ್ಕೆಟ್ ಇಂದು ಹಾಳುಕೊಂಪೆಯಾಗಿ ಮಾರ್ಪಟ್ಟಿದೆ. 2024ರ ಆಗಸ್ಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದ್ಧೂರಿಯಾಗಿ ಉದ್ಘಾಟಿಸಿದ್ದ ಈ ಮಾರುಕಟ್ಟೆ, ಕೇವಲ ಒಂದು ವರ್ಷದೊಳಗೆ ನಿರ್ವಹಣೆಯಿಲ್ಲದೆ ಕುಡುಕರ ಅಡ್ಡೆಯಾಗಿರುವುದು ದುರದೃಷ್ಟಕರ. ಕೋಟಿ ಕೋಟಿ ಸಾರ್ವಜನಿಕರ ಹಣ ವ್ಯಯಿಸಿದರೂ ಜಿಬಿಎ ಯೋಜನೆಗಳು ಹಳ್ಳ ಹಿಡಿಯುತ್ತಿರುವುದಕ್ಕೆ ಈ ಮಾರುಕಟ್ಟೆಯೇ ಸಾಕ್ಷಿಯಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments