ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ದಲಿತ ಸಿಎಂ' ಕೂಗು ಪ್ರಬಲವಾಗಿ ಕೇಳಿಬರುತ್ತಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಚಿಕ್ಕಮಗಳೂರಿಗೆ ಆಗಮಿಸಿದ ವೇಳೆ, ದಲಿತ ಸಂಘಟನೆಗಳ ಮುಖಂಡರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅವರನ್ನು 'ಮುಂದಿನ ಮುಖ್ಯಮಂತ್ರಿ' ಎಂದು ಘೋಷಣೆ ಕೂಗಿ ಅದ್ಧೂರಿಯಾಗಿ ಸ್ವಾಗತಿಸಿದರು. ಹಿರೇಮಗಳೂರು ಸರ್ಕಲ್ನಲ್ಲಿ ನಡೆದ ಈ ಬೆಳವಣಿಗೆಯು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಸಿದ್ದರಾಮಯ್ಯ ಅವರ ನಂತರ ಪರಮೇಶ್ವರ್ ಅವರೇ ಆ ಉನ್ನತ ಸ್ಥಾನಕ್ಕೇರಬೇಕು ಎಂಬ ಒತ್ತಾಯಕ್ಕೆ ಈ ಘಟನೆ ಹೊಸ ವೇಗ ನೀಡಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments