ಬೆಂಗಳೂರಿನ ಬಿಡಿಎ (BDA) ಅರ್ಕಾವತಿ ಲೇಔಟ್ನ ಚಳ್ಳಕೆರೆ ನಿವಾಸಿಗಳು ಸುಮಾರು 20 ವರ್ಷಗಳಾದರೂ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿ ಪರದಾಡುತ್ತಿದ್ದಾರೆ. ನ್ಯಾಯಾಲಯವು ನಿವಾಸಿಗಳಿಗೆ ತಕ್ಷಣ ಸೌಲಭ್ಯ ಒದಗಿಸುವಂತೆ ಆದೇಶ ನೀಡಿದ್ದರೂ, ಬಿಡಿಎ ಅಧಿಕಾರಿಗಳು ಮಾತ್ರ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ, ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಯಿಲ್ಲದೆ ಬದುಕು ದುಸ್ತರವಾಗಿದ್ದು, ತಮ್ಮ ಹಕ್ಕುಗಳಿಗಾಗಿ ನಿವಾಸಿಗಳು ಈಗ ಬೃಹತ್ ಹೋರಾಟಕ್ಕೆ ಇಳಿದಿದ್ದಾರೆ. ಬಿಡಿಎ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ನೂರಾರು ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿದ್ದು, ಸರ್ಕಾರದ ಮಧ್ಯಸ್ಥಿಕೆಗೆ ಆಗ್ರಹಿಸುತ್ತಿವೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments