Skip to playerSkip to main content
  • 7 hours ago
ಹುಬ್ಬಳ್ಳಿ: ತಾಲೂಕಿನ ನೂಲ್ವಿ ಗ್ರಾಮದ ಕಣಿವೆ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿದೆ.‌ ಗ್ರಾಮದ ಕಲ್ಲಿನ ಕ್ವಾರಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಚಿರತೆಯ ಚಲನವಲನಗಳು ಸೆರೆಯಾಗಿವೆ. ತಾಲೂಕಿನ ನೂಲ್ವಿ, ಶೆರೇವಾಡ, ಅದರಗುಂಚಿ ಗ್ರಾಮಗಳ ಸುತ್ತಮುತ್ತ ಚಿರತೆ ಸಂಚರಿಸಿರುವ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನೂಲ್ವಿ ಸೇರಿದಂತೆ ಇತರೆ ಗ್ರಾಮಗಳ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ ಬೋನಿಗೆ ಬಿದ್ದಿತ್ತು ಚಿರತೆ: ತಿಂಗಳಿಗೂ ಅಧಿಕ ಕಾಲ ಜನರ ನಿದ್ದೆಗೆಡಿಸಿದ್ದ ಚಿರತೆ ಕೆಲ ದಿನಗಳ ಹಿಂದೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಇಡಲಾಗಿದ್ದ ಬೋನಿಗೆ ಬಿದ್ದಿತ್ತು. ಇದರಿಂದ ಆತಂಕದಲ್ಲಿ ಕಾಲ ಕಳೆಯುತ್ತಿದ್ದ ಈ ಭಾಗದ ಜನರು ನಿರಾಳರಾಗಿದ್ದರು. ಡಿ.17ರಿಂದ ನಗರದ ವಿಮಾನ ನಿಲ್ದಾಣ, ಕಾರವಾರ ರಸ್ತೆ, ಸುತಗಟ್ಟಿ, ಗಾಮನಗಟ್ಟಿ, ಸತ್ತೂರು ಸೇರಿದಂತೆ ಅನೇಕ ಕಡೆಗಳಲ್ಲಿ 4-5 ಬಾರಿ ಈ ಚಿರತೆ ಕಾಣಿಸಿಕೊಂಡು, ಜನರ ಆತಂಕಕ್ಕೆ ಕಾರಣವಾಗಿತ್ತು. ಮೈಸೂರು, ಗದಗ, ಬೆಳಗಾವಿಯಿಂದ ಆಗಮಿಸಿದ್ದ ಅರಣ್ಯ ಇಲಾಖೆ ತಂಡ ವಿಶೇಷ ಕಾರ್ಯಾಚರಣೆ ನಡೆಸಿದ್ದರೂ ಚಿರತೆ ಸೆರೆಯಾಗಿರಲಿಲ್ಲ.‌ಚಿರತೆಯನ್ನು ಬೋನಿಗೆ ಬೀಳಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣದ ಆವರಣದಲ್ಲಿ 3 ಸಾಮಾನ್ಯ ಹಾಗೂ 1 ತುಮಕೂರು ಮಾದರಿ ವಿಶೇಷ ಬೋನಿಡಲಾಗಿತ್ತು. ಅದರಂತೆ, ಸತ್ತೂರಿನಲ್ಲಿ ಒಂದು ಬೋನ್ ಇಡಲಾಗಿತ್ತು. ಚಿರತೆಯ ಚಲನವಲನಗಳನ್ನು ತಿಳಿಯಲು ವಿವಿಧೆಡೆಗಳಲ್ಲಿ ಒಟ್ಟು 25ಕ್ಕೂ ಹೆಚ್ಚು ಟ್ರ್ಯಾಪ್ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಇವುಗಳನ್ನೂ ಓದಿ:ತುಮಕೂರು: ಒಂದೇ ದಿನ ಬೋನಿಗೆ ಬಿದ್ದ ಎರಡು ಚಿರತೆಗಳುಚಿರತೆ ದಾಳಿ ಪ್ರಕರಣ: ಪಾದಯಾತ್ರೆ ವೇಳೆ ಡ್ರೋಣ್ ಕಣ್ಗಾವಲಿಗೆ ಸಚಿವ ಖಂಡ್ರೆ ಸೂಚನೆ

Category

🗞
News
Comments

Recommended