ಬೆಳ್ತಂಗಡಿ: ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ಫೆ. 14ರಂದು ನಡೆದಿದೆ.ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ ಕೆಎಎಫ್ ಕ್ರಿಯೇಟಿವ್ ಆರ್ಟ್ & ಕ್ರಾಫ್ಟ್ ಸ್ಟೋರ್ನಲ್ಲಿ ಇಬ್ಬರು ಕೆಲಸದವರು ಫೆ.14 ರಂದು ಬೆಳಗ್ಗೆ 7:30 ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್ಗಳಿಗೆ ಗ್ಯಾಸ್ ತುಂಬಿಸುತ್ತಿದ್ದರು. ಬಲೂನ್ಗೆ ತುಂಬಿಸುತ್ತಿದ್ದ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಉಂಟಾಗಿ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ.ಘಟನೆ ವೇಳೆ ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗಡೆ ಓಡಿಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಅನಾಹುತದಿಂದ ಕಟ್ಟಡ ಸೇರಿದಂತೆ ಅಕ್ಕಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಘಟನೆಯನ್ನು ನೋಡಲು ನೂರಾರು ಮಂದಿ ಜಮಾಯಿಸಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು, ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದೆ ವೇಳೆ, ಬೆಂಕಿ ಘಟನೆಯನ್ನು ನೋಡುತ್ತಿದ್ದ ಶಾಪ್ ಕೆಲಸದಾಕೆ ಮೂರ್ಛೆ ಹೋದ ಘಟನೆಯೂ ಈ ವೇಳೆ ನಡೆಯಿತು ಬಳಿಕ ಸ್ಥಳೀಯರೆಲ್ಲ ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಇದನ್ನೂ ಓದಿ: ಸಾವಿನಿಂದ ರಕ್ಷಿಸಿದ ವ್ಯಕ್ತಿಯ ಕಾಲಿಗೆ ಬಿದ್ದು ಕೃತಜ್ಞತೆ ಸಲ್ಲಿಸಿದ ವ್ಯಕ್ತಿ: Watch in video
Comments