ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀ ಸಿದ್ದಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು.ರಥೋತ್ಸವಕ್ಕೆ ಮುನ್ನ ಮಠದ ಆವರಣದಲ್ಲಿ ಪೂಜಾ ವಿಧಿಗಳಿಗೆ ಚಾಲನೆ ನೀಡಲಾಯಿತು. ರಥೋತ್ಸವದ ಮುಂಭಾಗದಲ್ಲಿ ಮಠದ ವಿದ್ಯಾರ್ಥಿಗಳು ವಿವಿಧ ಕಲಾ ಪ್ರಕಾರಗಳನ್ನು ಪ್ರದರ್ಶಿಸಿದರು. ಸುಮಾರು 100 ಅಡಿ ಎತ್ತರದ ರಥವನ್ನು ಭಕ್ತರು ಎಳೆದರು.ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರೂ ಸಹ ರಥ ಎಳೆದು ಭಕ್ತಿ ಪ್ರದರ್ಶಿಸಿದರು. ರಥೋತ್ಸವ ಆರಂಭವಾಗುವುದಕ್ಕೂ ಮೊದಲು ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಮೆರವಣಿಗೆ ನಡೆಯಿತು. ಮಠದ ಆವರಣದಲ್ಲಿರುವ ಹಿರಿಯ ಸ್ವಾಮೀಜಿಗಳ ಗದ್ದುಗೆ ಬಳಿ ತೆರಳಿ, ಅಡ್ಡ ಪಲ್ಲಕ್ಕಿ ಮೆರವಣಿಗೆ ಮಾಡಲಾಯಿತು.ಮೆರವಣಿಗೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ವಿವಿಧ ಮಠಗಳ ಮಠಾಧೀಶರು ಪಾಲ್ಗೊಂಡಿದ್ದರು. ರಥಕ್ಕೆ ಭಕ್ತರು ರಥಕ್ಕೆ ಬಾಳೆಹಣ್ಣು ಎಸೆದು ತಮ್ಮ ಭಕ್ತಿ ಸಮರ್ಪಿಸಿದರು. ಬಾಲಕಿಯೊಬ್ಬಳು ಬಾಳೆಹಣ್ಣಿನ ಮೇಲೆ "ನಾನು ವೈದ್ಯ ಆಗಬೇಕು" ಎಂಬ ಆಸೆ ವ್ಯಕ್ತಪಡಿಸಿ ಭಕ್ತಿ ಸಮರ್ಪಣೆ ಮಾಡಿದ್ದು ವಿಶೇಷವಾಗಿತ್ತು.ಇದನ್ನೂ ಓದಿ: ವಿಜಯಪುರ: ಶಿವಗಿರಿಯಲ್ಲಿ ಶಿವ ಭಕ್ತರ ದಂಡು..Watch in video
Comments