ಬೆಂಗಳೂರಿನ ಇಂದ್ರಾನಗರದಲ್ಲಿ ಆಸ್ತಿಗಾಗಿ ಇಬ್ಬರು ಮಕ್ಕಳು ತಂದೆ ಮುಣಿಕ್ರಿಷ್ಣ (70) ಮೇಲೆ ಹಲ್ಲೆ ನಡೆಸಿದ್ದಾರೆ. ಮುಣಿಕ್ರಿಷ್ಣ ಬಿಎಂಟಿಸಿ ಕಂಟ್ರಾಕ್ಟರ್ ಆಗಿದ್ದು, ಕೋಟ್ಯಾಂತರ ರೂಪಾಯಿ ಆಸ್ತಿಯನ್ನು ಸಂಪಾದಿಸಿದ್ದರು. ಆದರೆ ಮಕ್ಕಳ ಹೆಸರಿಗೆ ಆಸ್ತಿಯನ್ನು ವಿಲ್ ಮಾಡಿರಲಿಲ್ಲ. ಇದರಿಂದಾಗಿ ಮಕ್ಕಳು ತಂದೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಮುಣಿಕ್ರಿಷ್ಣ ಗಾಯಗೊಂಡಿದ್ದು, ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಆರೋಪಿಗಳನ್ನು ಹುಡುಕಾಟ ನಡೆಸುತ್ತಿದ್ದಾರೆ.
Comments