Skip to playerSkip to main content
  • 9 minutes ago
ಮಂಗಳೂರು: ಅತಿ ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ಸಂಜೆ 5 ಗಂಟೆಯ ಸುಮಾರಿಗೆ ಉಳ್ಳಾಲ ತಾಲೂಕಿನ ಕಿನ್ಯ ಸಂಕೇಶ ಎಂಬಲ್ಲಿ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್​ ಡಿಕ್ಕಿಯಾದ ಪರಿಣಾಮ ಕಂಬ ಅರ್ಧ ತುಂಡಾಗಿ ಬಿದ್ದಿದೆ. ಬೈಕ್ ಸವಾರಿ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೈಕ್‌ನಲ್ಲಿದ್ದ ವಿದ್ಯಾರ್ಥಿಗಳು ಬಿಜಾಪುರದವರು ಎಂದು ಗುರುತಿಸಲಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಂಬ ತುಂಡಾಗಿ ವಿದ್ಯುತ್‌ ತಂತಿ ರಸ್ತೆಗೆ ಬಿದ್ದಿದೆ. ತಕ್ಷಣ ಜನ ಸೇರಿದರೂ ವಿದ್ಯುತ್ ಸಂಪರ್ಕ ಇದೆಯೆಂಬ ಭಯದಲ್ಲಿ ಹತ್ತಿರ ಹೋಗಲಿಲ್ಲ. ಗಾಯಾಳುಗಳು ರಸ್ತೆಗೆ ಬಿದ್ದು ಒಂದಷ್ಟು ಹೊತ್ತು ನರಳಾಡಿದ್ದಾರೆ. ಆದರೆ ಕಂಬ ಉರುಳುತ್ತಲೇ ವಿದ್ಯುತ್ ಲೈನ್ ಕಟ್ ಆಗಿದ್ದರಿಂದ ತೊಂದರೆ ಉಂಟಾಗಿಲ್ಲ. ಪೊಲೀಸರು ಕೇಸ್ ದಾಖಲಿಸಿಲ್ಲ. ಮೆಸ್ಕಾಂ ಇಲಾಖೆಯವರು ಕೇಸ್​ ದಾಖಲಿಸಿದ್ದಾರೆ. ಇದನ್ನೂ ನೋಡಿ: ಬೆಂಗಳೂರಲ್ಲಿ ರಸ್ತೆ ದಾಟುವಾಗ ಬೈಕ್ ಡಿಕ್ಕಿ, ಖಾಸಗಿ ಬ್ಯಾಂಕ್ ಉದ್ಯೋಗಿ ಸಾವು: ಸಿಸಿಟಿವಿಯಲ್ಲಿ ಅಪಘಾತದ ದೃಶ್ಯ ಸೆರೆ

Category

🗞
News
Comments

Recommended