ಸರ್ಕಾರದ ಮುಜುಗರದ ಸಂಗತಿಗಳನ್ನು ಮಾಧ್ಯಮಗಳು ಬಯಲಿಗೆಳೆಯುತ್ತಿವೆ ಎಂಬ ಕಾರಣಕ್ಕೆ ವಿಧಾನಸೌಧದಲ್ಲಿ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಸಿಎಂ, ಡಿಸಿಎಂ ಅಥವಾ ಶಾಸಕರು ಯಾರೇ ಆಗಲಿ, ಸರ್ಕಾರ ಸೂಚಿಸಿದ ನಿಗದಿತ ಸ್ಥಳದಲ್ಲಿ ಮಾತ್ರ ಮಾಧ್ಯಮಗಳಿಗೆ ಬೈಟ್ ನೀಡಬೇಕು ಮತ್ತು ಬೇರೆಡೆ ಪತ್ರಕರ್ತರಿಗೆ ನಿರ್ಬಂಧ ಹೇರಲಾಗಿದೆ. ಈ ನಿರ್ಧಾರವನ್ನು ಆಡಳಿತ ಪಕ್ಷದ ಶಾಸಕ ಡಾ. ರಂಗನಾಥ್ ಮತ್ತು ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಇಬ್ಬರೂ ಖಂಡಿಸಿದ್ದು, ಇದು ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಕರೆದಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments