ಕಲಿಯುಗದ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ ಪುಣ್ಯ ಕ್ಷೇತ್ರ ಮಂತ್ರಾಲಯದಲ್ಲಿ ರಾಯರ 405ನೇ ಪಟ್ಟಾಭಿಷೇಕ ಮಹೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಏಳು ದಿನಗಳ ಕಾಲ ನಡೆಯುವ 'ಗುರು ವೈಭವೋತ್ಸವ'ದ ಅಂಗವಾಗಿ ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರು ವಜ್ರಖಚಿತ ಮೂಲ ರಾಮದೇವರಿಗೆ ಹಾಗೂ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಅಭಿಷೇಕ ಮತ್ತು ಪೂಜೆಗಳನ್ನು ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಶುಭ ಸಂದರ್ಭದಲ್ಲಿ ಮಂತ್ರಾಲಯಕ್ಕೆ ಸಾವಿರಾರು ಭಕ್ತರು ಹರಿದು ಬರುತ್ತಿದ್ದು, ಜಪ-ತಪ, ಉರುಳುಸೇವೆ ಹಾಗೂ ಹೆಜ್ಜೆ ಸೇವೆಗಳ ಮೂಲಕ ರಾಯರಿಗೆ ಶ್ರದ್ಧಾಭಕ್ತಿ ಸಮರ್ಪಿಸುತ್ತಿದ್ದಾರೆ. ಆಧ್ಯಾತ್ಮಿಕ ಚೈತನ್ಯ ತುಂಬಿರುವ ಈ ಕಾರ್ಯಕ್ರಮವು ಮಂತ್ರಾಲಯದ ಪಾವಿತ್ರ್ಯತೆಯನ್ನು ಮತ್ತಷ್ಟು ಹೆಚ್ಚಿಸಿದೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments