ಕೊಪ್ಪಳ ಬಂದ್ ಹಿನ್ನೆಲೆಯಲ್ಲಿ ಹಿರೇಬಗನಾಳ ಗ್ರಾಮಸ್ಥರು ಕಾರ್ಖಾನೆಗಳ ಧೂಳಿನ ಸಮಸ್ಯೆಯ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ಕಾರ್ಖಾನೆಗಳಿಂದ ಹೊರಬರುತ್ತಿರುವ ಮಾಲಿನ್ಯದಿಂದ ಕಂಗಾಲಾಗಿರುವ ನೂರಾರು ಗ್ರಾಮಸ್ಥರು ಟ್ರ್ಯಾಕ್ಟರ್ಗಳಲ್ಲಿ ನಗರಕ್ಕೆ ಆಗಮಿಸಿ, ಬಸವೇಶ್ವರ ವೃತ್ತದಲ್ಲಿ ಸರ್ಕಾರದ ಶವಯಾತ್ರೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ಹೋರಾಟದಲ್ಲಿ ಶಾಲಾ ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಸಕ್ರಿಯವಾಗಿ ಪಾಲ್ಗೊಂಡಿದ್ದು, ಪರಿಸರ ಮಾಲಿನ್ಯ ತಡೆಗಟ್ಟಲು ವಿಫಲವಾಗಿರುವ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಶಾಶ್ವತ ಪರಿಹಾರಕ್ಕಾಗಿ ಆಗ್ರಹಿಸುತ್ತಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments