ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ಉದ್ಯಮಿ ಪ್ರಕಾಶ್ ಕುಂಪಲ ಅವರು ತಮ್ಮ ಪತ್ನಿ ಅರ್ಪಿತಾ ಅವರ ಸೀಮಂತ ಕಾರ್ಯಕ್ರಮವನ್ನು 'ಕೆಜಿಎಫ್' ಸಿನಿಮಾ ಮಾದರಿಯಲ್ಲಿ ಅದ್ಧೂರಿಯಾಗಿ ಆಚರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ವಿಶೇಷ ಸಮಾರಂಭದಲ್ಲಿ ಪತ್ನಿಗಾಗಿ ಹೆಲಿಕಾಪ್ಟರ್ ಮೂಲಕ ಹೂವಿನ ಸುರಿಮಳೆಗೈಯುವ ಮೂಲಕ ಅಪ್ರತಿಮ ಸರ್ಪ್ರೈಸ್ ಉಡುಗೊರೆ ನೀಡಿದ್ದಾರೆ. ಸಿನಿಮೀಯ ಶೈಲಿಯ ಈ ಅದ್ಧೂರಿ ಎಂಟ್ರಿ ಮತ್ತು ಹೂವಿನ ಮಳೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಕರಾವಳಿ ಜನತೆಯನ್ನು ಬೆರಗುಗೊಳಿಸಿದೆ. ಪತಿಯ ಈ ಅಪರೂಪದ ಪ್ರೀತಿಯ ಸನ್ನೆಗೆ ಪತ್ನಿ ಅರ್ಪಿತಾ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Comments