Skip to playerSkip to main content
  • 16 hours ago
ಚಿಕ್ಕಮಗಳೂರು: ಐಷಾರಾಮಿ ಹಾಗೂ ಲಾಂಗ್ ರೂಟ್, ಸ್ಲೀಪರ್ ಕೋಚ್ ಬಸ್​ಗಳಲ್ಲಿ ಸಾಮಾನ್ಯವಾಗಿ ಬೆಂಕಿ ಅವಘಡ ಸಂಭವಿಸಿದಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆಗಳನ್ನು ನೋಡಿದ್ದೇವೆ. ಆದರೆ, ಸರ್ಕಾರಿ ಕೆಂಪು ಬಸ್ಸಿಗೆ ಬೆಂಕಿ ಬಿದ್ದು ಸಂಪೂರ್ಣವಾಗಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವ ಘಟನೆ ನಗರದಲ್ಲಿ ನಡೆದಿದೆ.ನಗರದ ಜೂನಿಯರ್ ಕಾಲೇಜಿನ ಸಮೀಪದ ಬೇಲೂರು ಬಸ್ ನಿಲ್ದಾಣದ ಮುಂಭಾಗದಲ್ಲಿ ಕೆಎಸ್ಆರ್​ಟಿಸಿ ಬಸ್​ನಲ್ಲಿ ದಿಢೀರನೆ ಬೆಂಕಿ‌ ಕಾಣಿಸಿಕೊಂಡಿದ್ದನ್ನು ನೋಡಿದ ಬಸ್​ನ ಚಾಲಕ ಹಾಗೂ ನಿರ್ವಾಹಕ ಕೂಡಲೇ ಎಚ್ಚರಗೊಂಡಿದ್ದಾರೆ. ಕೂಡಲೇ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದ ಶಾಲಾ ಮಕ್ಕಳು, ವಿದ್ಯಾರ್ಥಿಗಳು, ಪ್ರಯಾಣಿಕರು ಹಾಗೂ ಮಹಿಳೆಯರನ್ನು ಬಸ್​ನಿಂದ ಕೆಳಗೆ ಇಳಿಸಿದ್ದಾರೆ. ನಂತರ ಬಸ್ ಧಗಧಗನೆ ಹೊತ್ತಿ ಉರಿಯಲು ಪ್ರಾರಂಭಿಸಿದೆ.ಬಸ್​ಗೆ ಬೆಂಕಿ ಬಿದ್ದು ರಸ್ತೆ ತುಂಬಾ ದಟ್ಟ ಹೊಗೆ ಆವರಿಸುತ್ತಿದ್ದಂತೆ ಕೂಡಲೇ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ರವಾನೆ ಮಾಡಿದ್ದಾರೆ. ಮಿಂಚಿನ ವೇಗದಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ, ಬಸ್​​ನಲ್ಲಿನ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾದರು.ಸಿಬ್ಬಂದಿ ಬೆಂಕಿ ನಂದಿಸಿದರೂ ಮತ್ತೆ ಮತ್ತೆ ಉರಿಯಲು ಪ್ರಾರಂಭಿಸಿತು. ಹೀಗಾಗಿ, ಸುತ್ತಮುತ್ತ ನೆರೆದಿದ್ದ ಜನರಿಗೆ ಆತಂಕ ಉಂಟಾಯಿತು.  ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಮುಂದಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದು, ತನಿಖೆ ಮುಂದುವರೆಸಿದ್ದಾರೆ.ಇದನ್ನೂ ಓದಿ :  ಬೆಂಗಳೂರು: ಹಾರ್ಡ್‌ವೇರ್ ಗೋದಾಮಿನಲ್ಲಿ ಅಗ್ನಿ‌ ಅವಘಡ - FIRE BREAKS OUT IN HARDWARE SHOP

Category

🗞
News
Transcript
00:00.
00:30the
00:35the
00:36the
00:36the
00:38I love it.
00:47I love it.
00:55So
01:44Don't give it back to, don't give it away.
01:56Don't give it back to, don't give it back to.
Comments

Recommended