Skip to playerSkip to main content
  • 20 minutes ago
ತುಮಕೂರು : ಜಿಲ್ಲೆಯ ಕೊರಟಗೆರೆ ತಾಲೂಕಿನ ಇತಿಹಾಸ ಪ್ರಸಿದ್ಧ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದ್ದು, ಚೋರರು ದೇಗುಲದಲ್ಲಿದ್ದ 30 ಕೆ.ಜಿಗೂ ಅಧಿಕ ಬೆಳ್ಳಿ, 10 ಗ್ರಾಂ ಬಂಗಾರ ಸೇರಿದಂತೆ ಒಂದು ಕೋಟಿಗೂ ಅಧಿಕ ಬೆಲೆ ಬಾಳುವ ಒಡವೆಗಳನ್ನ ಕದ್ದಿದ್ದಾರೆ.ದೇವಸ್ಥಾನದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ, ಗ್ಯಾಸ್ ಕಟರ್ ಬಳಸಿ, ಬಾಗಿಲು ಕಟ್ ಮಾಡಿ ಕಳ್ಳತನ ಮಾಡಿದ್ದಾರೆ. ಅಲ್ಲದೇ, ಕಳ್ಳತನದ ಸುಳಿವು ಸಿಗದಿರಲು ಸಿಸಿಟಿವಿ ಕ್ಯಾಮೆರಾದ ಡಿವಿಆರ್​ನ್ನೂ ಕೂಡ ಹೊತ್ತೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಂದಿನಂತೆ ಬೆಳಗ್ಗೆ ದೇವಸ್ಥಾನದ ಪೂಜೆಗೆ ಬಂದ ಅರ್ಚಕರಿಗೆ ಕಳ್ಳತನ ಆಗಿರುವುದು ಗೊತ್ತಾಗಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸ್ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗಾಗಿ ತನಿಖೆ ಮುಂದುವರೆದಿದೆ.ಘಟನಾ ಸ್ಥಳಕ್ಕೆ ತುಮಕೂರಿನ ಆಡಿಷನಲ್ ಎಸ್​​ಪಿ ಪುರುಷೋತ್ತಮ್, ಮಧುಗಿರಿ ಡಿವೈಎಸ್​​ಪಿ ಮಂಜುನಾಥ್, ಕೊರಟಗೆರೆ ತಹಶೀಲ್ದಾರ್ ಮಂಜುನಾಥ್, ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಕೊರಟಗೆರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ :  ಮನೆ ಮಾಲೀಕರು ಅಮೆರಿಕದಲ್ಲಿದ್ದಾಗ ಕಳ್ಳನ ಕೈಚಳಕ ; 3 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದ ರಾಜಸ್ಥಾನ ಮೂಲದ ಆರೋಪಿ ಬಂಧನ

Category

🗞
News
Transcript
00:00I
00:30The
00:30one
00:31one
00:31two
00:31three
00:32three
00:34three
00:35three
00:58four
00:59four
01:01three
01:04four
01:04four
01:04four
01:04four
01:04four
01:04five
01:04five
01:04five
01:05four
01:06five
01:07five
01:07six
01:07five
01:08six
01:09six
01:09seven
01:10six
01:12six
01:12five
01:14six
01:15five
Comments

Recommended