ತುಮಕೂರು : ಜಿಲ್ಲೆಯ ಕೊರಟಗೆರೆ ತಾಲೂಕಿನ ಇತಿಹಾಸ ಪ್ರಸಿದ್ಧ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿದ್ದು, ಚೋರರು ದೇಗುಲದಲ್ಲಿದ್ದ 30 ಕೆ.ಜಿಗೂ ಅಧಿಕ ಬೆಳ್ಳಿ, 10 ಗ್ರಾಂ ಬಂಗಾರ ಸೇರಿದಂತೆ ಒಂದು ಕೋಟಿಗೂ ಅಧಿಕ ಬೆಲೆ ಬಾಳುವ ಒಡವೆಗಳನ್ನ ಕದ್ದಿದ್ದಾರೆ.ದೇವಸ್ಥಾನದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ, ಗ್ಯಾಸ್ ಕಟರ್ ಬಳಸಿ, ಬಾಗಿಲು ಕಟ್ ಮಾಡಿ ಕಳ್ಳತನ ಮಾಡಿದ್ದಾರೆ. ಅಲ್ಲದೇ, ಕಳ್ಳತನದ ಸುಳಿವು ಸಿಗದಿರಲು ಸಿಸಿಟಿವಿ ಕ್ಯಾಮೆರಾದ ಡಿವಿಆರ್ನ್ನೂ ಕೂಡ ಹೊತ್ತೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಂದಿನಂತೆ ಬೆಳಗ್ಗೆ ದೇವಸ್ಥಾನದ ಪೂಜೆಗೆ ಬಂದ ಅರ್ಚಕರಿಗೆ ಕಳ್ಳತನ ಆಗಿರುವುದು ಗೊತ್ತಾಗಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸ್ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗಾಗಿ ತನಿಖೆ ಮುಂದುವರೆದಿದೆ.ಘಟನಾ ಸ್ಥಳಕ್ಕೆ ತುಮಕೂರಿನ ಆಡಿಷನಲ್ ಎಸ್ಪಿ ಪುರುಷೋತ್ತಮ್, ಮಧುಗಿರಿ ಡಿವೈಎಸ್ಪಿ ಮಂಜುನಾಥ್, ಕೊರಟಗೆರೆ ತಹಶೀಲ್ದಾರ್ ಮಂಜುನಾಥ್, ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಕೊರಟಗೆರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ : ಮನೆ ಮಾಲೀಕರು ಅಮೆರಿಕದಲ್ಲಿದ್ದಾಗ ಕಳ್ಳನ ಕೈಚಳಕ ; 3 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದ ರಾಜಸ್ಥಾನ ಮೂಲದ ಆರೋಪಿ ಬಂಧನ
Comments