Skip to playerSkip to main content
  • 2 minutes ago
ಚಿಕ್ಕಮಗಳೂರು: ಕಾರಿನ ಮೇಲೆ ಕಟ್ಟಿಗೆ ತುಂಬಿದ್ದ ಲಾರಿ ಉರುಳಿ ಬಿದ್ದು, ಮಗು ಸಹಿತ ದಂಪತಿ ಪವಾಡ ಸದೃಶ ಪಾರಾಗಿರುವ ಘಟನೆ ನಗರದ ಹೊರವಲಯದ ಲಕ್ಯಾ ಕ್ರಾಸ್​ ಬಳಿ ನಡೆದಿದೆ.ಸ್ಥಳೀಯರು ತಕ್ಷಣ ಧಾವಿಸಿ ಕಾರಿನೊಳಗೆ ಸಿಲುಕಿದ್ದ ದಂಪತಿ ಹಾಗೂ ಮಗುವನ್ನು ಹೊರ ತೆಗೆದು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಳಿಕ ಪೊಲೀಸರು ಮತ್ತು ಸ್ಥಳೀಯರು ಟ್ರಾಫಿಕ್​ ವ್ಯವಸ್ಥೆಯನ್ನು ಸುಗಮಗೊಳಿಸಿದರು. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.ಈ ಸಂಬಂಧ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಇದನ್ನೂ ಓದಿ: ಚಿತ್ರದುರ್ಗದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಪೊಲೀಸ್​ ಅಧಿಕಾರಿಗಳು ಸ್ಥಳದಲ್ಲೇ ಸಾವುಚಿತ್ರದುರ್ಗ ಜಿಲ್ಲೆಯ ಹೆಗ್ಗೆರೆ ಬಳಿ ಇಂದು ಮುಂಜಾನೆ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪೊಲೀಸ್​ ರಿಸರ್ವ್ ಸಬ್ ಇನ್ಸ್​ಪೆಕ್ಟರ್​ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನಿಬ್ಬರು ಎಸ್​​ಐಗಳಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಮಂಜುನಾಥ್, ಅಂಬರೀಷ್ ಹಾಗೂ ಸಚಿನ್ ಮೃತ ಆರ್​ಎಸ್​​ಐಗಳಾಗಿದ್ದಾರೆ.

Category

🗞
News
Transcript
00:02.
00:04.
00:04.
00:04.
00:04.
00:04.
00:04.
00:07.
00:08.
00:13.
00:21I don't know.
00:50that's that's that go
Comments

Recommended