ದೆಹಲಿಯ ವಿಜ್ಞಾನ ಭವನದಲ್ಲಿ ಚುನಾವಣಾ ಆಯೋಗವು ಸುದ್ದಿಗೋಷ್ಠಿಯನ್ನು ಕರೆದಿದ್ದು, ಪಂಚರಾಜ್ಯಗಳಾದ ತಮಿಳುನಾಡು, ಪುದುಚ್ಚೇರಿ, ಕೇರಳ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ವಿಧಾನಸಭಾ ಚುನಾವಣೆಗಳ ದಿನಾಂಕಗಳನ್ನು ಘೋಷಿಸಲಾಗುವುದು. ಪಶ್ಚಿಮ ಬಂಗಾಳದಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದರೆ, ಅಸ್ಸಾಂನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆಯಿದೆ. ತಮಿಳುನಾಡು, ಪುದುಚ್ಚೇರಿ ಮತ್ತು ಕೇರಳದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಮುಖ್ಯ ಚುನಾವಣಾಧಿಕಾರಿ ಸುನೀಲ್ ಅರೋರಾ ನೇತೃತ್ವದ ಚುನಾವಣಾ ಆಯೋಗವು ಈ ಸುದ್ದಿಗೋಷ್ಠಿಯಲ್ಲಿ ಪಂಚರಾಜ್ಯಗಳ ಚುನಾವಣಾ ದಿನಾಂಕಗಳನ್ನು ಘೋಷಿಸಲಿದೆ.
Comments