ಬಳ್ಳಾರಿ: ಜಿಲ್ಲೆಯ ಕುರುಗೋಡು ಪಟ್ಟಣದಲ್ಲಿ ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ಗಾಗಿ ಸಾರ್ವಜನಿಕರು ಪರದಾಡುತ್ತಿದ್ದ ದೃಶ್ಯ ಇಂದು ಕಂಡುಬಂತು. ಹಬ್ಬದ ಹಿನ್ನೆಲೆಯಲ್ಲಿ ಸಿಲಿಂಡರ್ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಪೂರೈಕೆ ಕೊರತೆಯಾಗಿದೆ. ಪಟ್ಟಣದ ಭರತ್ ಗ್ಯಾಸ್ ಏಜೆನ್ಸಿ ಕಚೇರಿ ಎದುರು ದೊಡ್ಡ ಸಂಖ್ಯೆಯಲ್ಲಿ ಜನರು ಸರತಿ ಸಾಲಿನಲ್ಲಿ ನಿಂತಿದ್ದರು.ಸೌದೆ ಮೊರೆ ಹೋದ ಹೊಟೇಲ್ ಮಾಲೀಕರು (ಹಾವೇರಿ): ಯುದ್ದದ ಪರಿಣಾಮ ತೈಲ, LPG ಸೇರಿದಂತೆ ವಿವಿಧ ವಸ್ತುಗಳಿಗೆ ಮಧ್ಯಪ್ರಾಚ್ಯದ ದೇಶಗಳನ್ನು ಅವಲಂಬಿಸಿದ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಹಾವೇರಿಯ ಹೊಟೇಲ್ ಮಾಲೀಕರು ಕಳೆದ 8 ದಿನಗಳಿಂದ ವಾಣಿಜ್ಯ ಸಿಲಿಂಡರ್ಗಳ ಕೊರತೆ ಎದುರಿಸುತ್ತಿದ್ದಾರೆ.ಹಾವೇರಿಯ ಹೊಟೇಲ್ ಮಾಲೀಕರು ಆರಂಭದಲ್ಲಿ ಗ್ಯಾಸ್ ಕಂಪನಿಗಳಿಗೆ ಮನವಿ ಮಾಡಿದ್ದರು. ಆದರೆ, ಯುದ್ದ ಪರಿಸ್ಥಿತಿ ಹಿನ್ನೆಲೆಯಲ್ಲಿ ಏಜೆನ್ಸಿಗಳು ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡಿಲ್ಲ. ಇದರಿಂದ ಬೇಸತ್ತ ಹೊಟೇಲ್ ಮಾಲೀಕರಲ್ಲಿ ಕೆಲವರು ಇದ್ದಿಲು ಮೊರೆ ಹೋಗಿದ್ದಾರೆ. ಇನ್ನು ಕೆಲವರು ಸೌದೆಗೆ ಮೊರೆ ಹೋಗಿದ್ದಾರೆ.ಇದನ್ನೂ ಓದಿ : ಹಾವೇರಿಯಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ: ಸೌದೆ ಮೊರೆ ಹೋದ ಹೊಟೇಲ್ ಮಾಲೀಕರು