ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮಲ್ಲೇಶ್ವರ ಗುಡ್ಡಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಅರಣ್ಯ ಪ್ರದೇಶ ಹೊತ್ತಿ ಉರಿದಿದೆ. ಆರೇಮಲ್ಲಾಪುರ, ಐರಣಿ ಗ್ರಾಮಗಳ ಬಳಿ ಇರುವ ಬೆಟ್ಟದ ಮಲ್ಲೇಶ್ವರ ಗುಡ್ಡದಲ್ಲಿ ಘಟನೆ ನಡೆದಿದೆ. ಈ ಸ್ಥಳವನ್ನು ಜಿಲ್ಲಾಡಳಿತ ಇತ್ತಿಚೆಗಷ್ಟೇ ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಮುಂದಾಗಿತ್ತು. ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ಕೆಲ ತಿಂಗಳ ಹಿಂದಷ್ಟೇ ಈ ಸ್ಥಳವನ್ನು ಆಯ್ಕೆ ಮಾಡಿದ್ದರು.ಅರಣ್ಯಧಾಮದಲ್ಲಿ ಜ್ವಾಲೆ ಆವರಿಸಿದೆ. ಸಂಪದ್ಭರಿತ ವನಸ್ಪತಿ ಅಪರೂಪದ ಗಿಡಮೂಲಿಕೆಗಳು, ಕೃಷ್ಣಮೃಗ ಸೇರಿ ಹಲವು ಪ್ರಾಣಿ-ಪಕ್ಷಿಗಳು ಈ ಅರಣ್ಯ ಪ್ರದೇಶದಲ್ಲಿವೆ. ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದಾರೆ.ಇದನ್ನೂ ಓದಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ಪ್ರದೇಶ ನಾಶನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 20ಕ್ಕೂ ಹೆಚ್ಚು ಕಡೆ ಬೆಂಕಿ ಬಿದ್ದಿದ್ದು, ಅಪರೂಪದ ಶೋಲಾ ಹುಲ್ಲುಗಾವಲು, ಸಸ್ಯ ಸಂಪತ್ತು ಸೇರಿದಂತೆ ಅಮೂಲ್ಯ ಔಷಧಿ ಗಿಡಗಳು ಬೆಂಕಿಗಾಹುತಿಯಾಗಿವೆ. ಇಲ್ಲಿಯೂ ಕೂಡ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
Comments