Skip to playerSkip to main content
  • 20 minutes ago
ಮೈಸೂರು: ಬೃಹತ್​ ಗಾತ್ರದ ಬೇವಿನ ಮರ ಬುಡಸಮೇತ ಧರೆಗುರುಳಿ ಒಂದು ಕಾರು, ಆಟೋ, ಬೈಕ್ ಜಖಂಗೊಂಡಿದೆ. ಅದೃಷ್ಟವಶಾತ್ ವಾಹನದಲ್ಲಿದ್ದವರು ಪಾರಾಗಿದ್ದಾರೆ. ನಗರದ ಕೇಂದ್ರ ಗ್ರಂಥಾಲಯದ ಮುಂಭಾಗ ಶನಿವಾರ ಸಂಜೆ ಘಟನೆ ನಡೆದಿದೆ. ಬೇರುಗಳಲ್ಲಿ ಸತ್ವ ಕಳೆದುಕೊಂಡು ಮರ ಧರೆಗುಳಿದ್ದು, ಹೋಟೆಲ್ ಮತ್ತು ಬಾರ್‌ನ ಕಾಂಪೌಂಡ್ ಹಾನಿಗೊಳಗಾಗಿದೆ. ಧಾರಾಕಾರ ಮಳೆಯಿಂದ ಮರದ ಬೇರುಗಳು ಸಡಿಲಗೊಂಡಿದ್ದವು. ಇದರಿಂದ ಭಾರ ತಾಳಲಾರದೇ ಮರ ಧರೆಗುರುಳಿದೆ.ಕಾಂಪೌಂಡ್ ಪಕ್ಕ ನಿಲ್ಲಿಸಲಾಗಿದ್ದ ಆಟೋ ಸಂಪೂರ್ಣ ಜಖಂಗೊಂಡಿದ್ದರೆ, ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಬೈಕ್​ ಹಾಗೂ ಕಾರಿನ ಮೇಲೂ ರೆಂಬೆ ಕೊಂಬೆಗಳು ಬಿದ್ದಿವೆ. ಗೋಪಾಲ ಗೌಡ ಎಂಬ ಬೈಕ್​ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.ಮರ ಬಿದ್ದ ರಭಸಕ್ಕೆ ಕಾರಿನ ಮೇಲ್ಭಾಗ ಹಾಗೂ ಹಿಂಭಾಗ ಸಂಪೂರ್ಣ ಜಖಂ ಆಗಿದ್ದು, ಎಲ್ಲ ಗ್ಲಾಸ್‌ಗಳು ಪುಡಿಯಾಗಿವೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಾಗಿಲ್ಲ.ಮರದ ಕೆಳಭಾಗದಲ್ಲಿ ವಿದ್ಯುತ್ ಕಂಬಗಳಿದ್ದು, ಎರಡು ಕಂಬಗಳು ಮುರಿದು ಬಿದ್ದಿವೆ. ವಿದ್ಯುತ್ ತಂತಿಗಳು ತುಂಡಾಗಿದ್ದು ತಕ್ಷಣವೇ ವಿದ್ಯುತ್ ವ್ಯತ್ಯಯವಾಗಿ ಭಾರಿ ಅನಾಹುತ ತಪ್ಪಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿ, ಸಾಕಷ್ಟು ಸಮಯ ವಾಹನ ಸವಾರರು ಟ್ರಾಫಿಕ್ ಸಮಸ್ಯೆ ಎದುರಿಸುವಂತಾಯಿತು.ವಿಷಯ ತಿಳಿದು ಕೂಡಲೇ ಸಂಚಾರ ಪೊಲೀಸರು ಟ್ರಾಫಿಕ್ ನಿಯಂತ್ರಿಸಿದರು. ಮಹಾನಗರ ಪಾಲಿಕೆ ಸಿಬ್ಬಂದಿ ಜೆಸಿಬಿ ಹಾಗೂ ಮಷಿನ್ ಮೂಲಕ ಮರ ತುಂಡರಿಸಿ ತೆರವು ಕಾರ್ಯ ನಡೆಸಿದರು. ಬಳಿಕ ವಾಹನ ಸವಾರರಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು. ಇದನ್ನೂ ಓದಿ: ಗುಡುಗು ಸಹಿತ ಮಳೆ: ಸಿಡಿಲು ಬಡಿದು ಸುಟ್ಟುಕರಕಲಾದ ತೆಂಗಿನ ಮರ, ಸಿರುಗುಪ್ಪದಲ್ಲಿ ಆಲಿಕಲ್ಲು ಮಳೆ

Category

🗞
News
Transcript
00:00A
00:00A
00:00A
00:01A
00:01A
00:03A
00:04A
00:04Oh, my God.
00:56Oh, my God.
01:04Oh, my God.
Comments

Recommended