Skip to playerSkip to main content
  • 1 hour ago
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಏಕಾಏಕಿ ಬಸ್​​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್‌ ಬೆಂಕಿ ಹೊತ್ತಿಕೊಂಡು ಉರಿದಿದೆ. ಘಟನೆಯಲ್ಲಿ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ಗುರುವಾರ ರಾತ್ರಿ 10.15ರ ಸುಮಾರಿಗೆ ಮೆಜೆಸ್ಟಿಕ್​ನಿಂದ ಶಿವಮೊಗ್ಗಕ್ಕೆ ತೆರಳಲು ಹೊರಟ ಬಸ್ ಲುಲು ಮಾಲ್ ಮುಂಭಾಗ ಬರುತ್ತಿದ್ದಂತೆ ಏಕಾಏಕಿ ನಿಂತಿದೆ. ಚಾಲಕ ಪರಿಶೀಲನೆ ನಡೆಸುವಷ್ಟರಲ್ಲೇ ಬಸ್​ನ ಕೆಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಗೊತ್ತಾಗಿದೆ. ಕೂಡಲೇ ಬಸ್​​ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ನೋಡ ನೋಡುತ್ತಿದ್ದಂತೆ ಬೆಂಕಿ ಧಗಧಗನೆ ಉರಿದು ಸಂಪೂರ್ಣ ಬಸ್​​ ಆವರಿಸಿಕೊಂಡಿದೆ. ಅಗ್ನಿಶಾಮಕದಳ ಸಿಬ್ಬಂದಿ ಬರುವಷ್ಟರಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿತ್ತು. ಬಳಿಕ ಬೆಂಕಿ ನಂದಿಸಲಾಯಿತು.ಬಸ್​ಗೆ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ಓಕಳೀಪುರ, ಸಿರ್ಸಿ ಸರ್ಕಲ್ ಬಳಿ ಕೆಲಕಾಲ ಟ್ರಾಫಿಕ್ ಜಾಮ್ ಹೆಚ್ಚಾಗಿತ್ತು. ಬೆಂಕಿ ಕಾಣಿಸಿಕೊಂಡಿರುವುದಕ್ಕೆ‌ ನಿಖರ ಕಾರಣ ತಿಳಿದು ಬಂದಿಲ್ಲ. ಮಲ್ಲೇಶ್ವರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಲಾರಿ-ಬಸ್​ ನಡುವೆ ಭೀಕರ ಅಪಘಾತ: 13 ಮಂದಿ ಸಜೀವ ದಹನ, ಸಾವಿನ ಸಂಖ್ಯೆ 14ಕ್ಕೇರಿಕೆ

Category

🗞
News
Comments

Recommended