ಚಿಕ್ಕಮಗಳೂರಿನ ಮಾಣಿಕ್ಯದಾರ ಪ್ರವಾಸಿ ತಾಣಕ್ಕೆ ಚಾರಣಕ್ಕೆ ಬಂದಿದ್ದ ಕೇರಳ ಮೂಲದ ಅಪ್ರಾಪ್ತ ಬಾಲಕಿ ಶ್ರಿನಂದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದಳು. ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ನಡೆಸಿದ ಸತತ ಶೋಧ ಕಾರ್ಯಾಚರಣೆಯ ಬಳಿಕ, ಅವಳು ನಾಪತ್ತೆಯಾದ ಸ್ಥಳದಿಂದ ಸುಮಾರು 5 ಕಿಲೋಮೀಟರ್ ದೂರದಲ್ಲಿ, 500 ಅಡಿ ಆಳದ ಕಂದಕದಲ್ಲಿ ಅವಳ ಮೃತದೇಹ ಪತ್ತೆಯಾಗಿದೆ. 150 ಸಿಬ್ಬಂದಿಗಳು ಡ್ರೋನ್ ಕ್ಯಾಮೆರಾ ಸೇರಿದಂತೆ ಆಧುನಿಕ ತಂತ್ರಜ್ಞಾನ ಬಳಸಿ ಹಗಲು ರಾತ್ರಿ ಶೋಧ ನಡೆಸಿದ್ದರು. SP ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಾಲಕಿಯ ಸಾವು ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದಿದ್ದೋ ಎಂಬ ಅನುಮಾನ ವ್ಯಕ್ತವಾಗಿದ್ದು, ಪ್ರಾಥಮಿಕ ತನಿಖೆ ಆರಂಭಿಸಲಾಗಿದೆ.
Comments