ಕಾರವಾರ: ಅಂಕೋಲಾ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.ಗ್ರಾಮದ ಮನೆಯೊಂದರೊಳಗೆ ಸುಮಾರು 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಅವಿತುಕೊಂಡಿತ್ತು. ಮನೆಯೊಳಗೆ ಇಷ್ಟೊಂದು ದೊಡ್ಡ ಗಾತ್ರದ ಹಾವನ್ನು ಕಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ತಕ್ಷಣವೇ ಎಚ್ಚೆತ್ತುಕೊಂಡು ಈ ಬಗ್ಗೆ ಉರಗ ಪ್ರೇಮಿಗಳ ತಂಡಕ್ಕೆ ಮಾಹಿತಿಯನ್ನು ನೀಡಿದರು. ಮಾಹಿತಿ ಪಡೆದ ಉರಗ ತಜ್ಞರ ತಂಡದ ಪ್ರಮುಖ ಸದಸ್ಯ ಸೂರಜ್ ಶೆಟ್ಟಿ ಅರಬೈಲ್ ಹಾಗೂ ಹರೀಶ್ ಮಡಿವಾಳ ಅವರು ಘಟನಾ ಸ್ಥಳಕ್ಕೆ ಧಾವಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಬಹಳ ಎಚ್ಚರಿಕೆಯಿಂದ ಕಾರ್ಯಾಚರಣೆಗಿಳಿದ ಈ ತಂಡ, ಮನೆಯೊಳಗೆ ಸೇರಿಕೊಂಡಿದ್ದ ಕಾಳಿಂಗ ಸರ್ಪವನ್ನು ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾದರು. ಸೆರೆಹಿಡಿದ ಬಳಿಕ 16 ಅಡಿಯ ಕಾಳಿಂಗ ಸರ್ಪವನ್ನು ಜನವಸತಿ ಇಲ್ಲದ ದಟ್ಟ ಅರಣ್ಯ ಪ್ರದೇಶಕ್ಕೆ ಒಯ್ದು ಸುರಕ್ಷಿತವಾಗಿ ಬಿಡಲಾಗಿದೆ. ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟ ರಕ್ಷಣಾ ತಂಡದ ಕಾರ್ಯವನ್ನು ಸ್ಥಳೀಯರು ಶ್ಲಾಘಿಸಿ, ಅಭಿನಂದನೆ ಸಲ್ಲಿಸಿದರು.ಇದನ್ನೂ ಓದಿ: ರಾಮನಗರ: ಮನೆಗೆ ನುಗ್ಗಿ ಕಾಡಾನೆಗಳ ಉಪಟಳ
Comments