ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಗಾಂಜಾ ಸೇವಿಸಿದ್ದ ಲಾರಿ ಚಾಲಕ ನಿಯಂತ್ರಣ ತಪ್ಪಿ ಬೈಕ್, ಕಾರು ಮತ್ತು ಬಸ್ಗೆ ಡಿಕ್ಕಿ ಹೊಡೆದ ನಂತರ ಲಾರಿ ಪಲ್ಟಿಯಾಗಿದೆ. ಅಪಘಾತದ ನಂತರ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯನಗರ ಎಸ್ಪಿ ಜಾನವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ದುರಸ್ತಿ ಕಾಮಗಾರಿ ಕೂಡ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ತಿಳಿದುಬಂದಿದೆ.
Comments