ರಾಯಚೂರು ಜಿಲ್ಲೆಯಲ್ಲಿ ಸಿಡಿಲು ಬಡಿದು ಮಹಿಳೆ ಮೃತಪಟ್ಟ ಘಟನೆ ವರದಿಯಾಗಿದೆ. ಗೋಳಪಲ್ಲಿ ನಿವಾಸಿ ದುರ್ಗಮ್ಮ ಸಾಬಣ್ಣ (40 ವರ್ಷ) ಮೇವಿನ ಬಣವಿಗೆ ಟಾರ್ಪಲ್ ಮುಚ್ಚಲು ಹೋದ ಸಂದರ್ಭದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸಿಡಿಲು ಬಡಿದು ಸಂಭವಿಸಿದ ಮೊದಲ ಸಾವು ಇದಾಗಿದೆ. ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದ್ದು, ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ರಾಯಚೂರು ಮತ್ತು ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಅವಾಂತರಗಳು ಸಂಭವಿಸಿವೆ.
Comments