Skip to playerSkip to main content
  • 7 minutes ago
ಉಡುಪಿ : ನಗರದ ಸಿಟಿ ಬಸ್ ನಿಲ್ದಾಣದ ಸಮೀಪದ ವಾಣಿಜ್ಯ ಕಟ್ಟಡದಲ್ಲಿ ಭಾನುವಾರ ಸಂಜೆ ಬೆಂಕಿ ದುರಂತ ಸಂಭವಿಸಿದ್ದು, ಇದರಿಂದ ಹಲವು ಅಂಗಡಿಗಳು ಸುಟ್ಟು ಭಸ್ಮವಾಗಿ ಕೋಟ್ಯಂತರ ರೂ. ನಷ್ಟ ಉಂಟಾಗಿದೆ. ಪ್ರಾರಂಭದಲ್ಲಿ ಕಟ್ಟಡದಲ್ಲಿನ ಮೊಬೈಲ್ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಕಟ್ಟಡದ ಹಲವು ಅಂಗಡಿಗಳಿಗೆ ವಿಸ್ತರಿಸಿದ್ದು, ಇಲ್ಲಿನ ಎಲ್ಲ ಸ್ವತ್ತುಗಳು ಸುಟ್ಟು ಭಸ್ಮವಾಗಿವೆ. ಮೊಬೈಲ್, ಹಾರ್ಡ್‌ವೇರ್, ಪ್ಲಾಸ್ಟಿಕ್ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿವೆ. ವಿಷಯ ತಿಳಿಯುತ್ತಿದ್ದಂತೆಯೇ ಮೂರು ವಾಹನಗಳಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಆದರೆ, ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. ಬಳಿಕ ಟ್ಯಾಂಕ‌ರ್ ಮೂಲಕ ನೀರು ತರಿಸಿ ಕಾರ್ಯಾಚರಣೆ ಮುಂದುವರಿಸಲಾಗಿದೆ. ಸುಮಾರು ಎರಡು ಗಂಟೆಗಳ ನಿರಂತರ ಕಾರ್ಯಾಚರಣೆಯಿಂದ ಬೆಂಕಿ ನಿಯಂತ್ರಣಕ್ಕೆ ತರಲಾಗಿದೆ.  ಬೆಂಕಿ ನಂದಿಸುವಲ್ಲಿ ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ ಸೇರಿದಂತೆ ಸ್ಥಳೀಯರು ಸಹಕಾರ ನೀಡಿದ್ದು, ದುರಂತ ಸಂಭವಿಸಿದ 45 ನಿಮಿಷಗಳ ಬಳಿಕ ಆಗಮಿಸಿದ ಅಗ್ನಿಶಾಮಕ ದಳದ ವಿರುದ್ಧ ಅಂಗಡಿಗಳ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ :  ಲಾರಿ ಡೀಸೆಲ್ ಟ್ಯಾಂಕ್ ಸ್ಫೋಟ : ಮೂರು ಲಾರಿ ಬೆಂಕಿಗಾಹುತಿ ; ಮೂವರಿಗೆ ಗಾಯ - LORRY DIESEL TANK EXPLODES

Category

🗞
News
Transcript
00:28Transcription by CastingWords
00:58CastingWords
01:11CastingWords
01:23CastingWords
Comments

Recommended