Skip to playerSkip to main content
  • 3 days ago
ಶಿವಮೊಗ್ಗ: ಪಶ್ಚಿಮ ಬಂಗಾಳ, ಪುದುಚೇರಿ ಹಾಗೂ ಅಸ್ಸೋಂನಲ್ಲಿ ಬಿಜೆಪಿ ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ ಮಾಡಿದೆ. ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ವಿಜಯೋತ್ಸವವನ್ನು ಆಚರಿಸಲಾಯಿತು. ಪಶ್ಚಿಮ ಬಂಗಾಳದಲ್ಲಿ ಪಡೆದ ಜಯಕ್ಕಾಗಿ ದೀದಿ ಹೋದ್ರು, ದುರ್ಗಾ ಬಂದರು ಎಂಬ ಘೋಷಣೆಯೊಂದಿಗೆ ಸಂಭ್ರಮಾಚರಣೆ ನಡೆಸಿದರು. ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಈ ವೇಳೆ, ಬಿಜೆಪಿ ಪಕ್ಷಕ್ಕೆ ಹಾಗೂ ಅಮಿತ್ ಶಾ ಅವರಿಗೆ ಜಯಕಾರ ಹಾಕಿದರು.  ಈ ವೇಳೆ‌ ಮಾತನಾಡಿದ ಸಂಸದ ಬಿ ವೈ ರಾಘವೇಂದ್ರ ಅವರು, ನಮ್ಮ ದೇಶದಲ್ಲಿ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಮತದಾರರು ಸ್ಪಷ್ಟವಾಗಿ, ಮೋದಿ ಜೀ ಹಾಗೂ ಭಾರತೀಯ ಜನತಾ ಪಕ್ಷದ ಪರವಾಗಿ ನಿಲುವನ್ನು ವ್ಯಕ್ತಪಡಿಸುವುದನ್ನು ಫಲಿತಾಂಶದ ಮೂಲಕ ನೋಡುತ್ತಿದ್ದೇವೆ ಎಂದಿದ್ದಾರೆ. ಐದು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಎನ್​ಡಿಎ ನಾಲ್ಕು ರಾಜ್ಯಗಳಲ್ಲಿ ಸರ್ಕಾರ ರಚನೆ ಮಾಡಬಹುದಾಗಿದೆ. ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚನೆ ಸ್ಪಷ್ಟವಾಗಿ ಕಾಣುತ್ತಿದೆ. ಅಸ್ಸೋಂನಲ್ಲಿ ಹ್ಯಾಟ್ರಿಕ್​ ಜಯ ಸಾಧಿಸಿ ಮತ್ತೊಮ್ಮೆ ಸರ್ಕಾರ ರಚನೆ ಮಾಡುತ್ತಿದ್ದೇವೆ. ಪುದುಚೇರಿಯಲ್ಲಿ ಸಹ ಎರಡನೇ ಬಾರಿ ಸರ್ಕಾರ ರಚನೆ ಮಾಡುತ್ತಿದ್ದೇವೆ. ತಮಿಳುನಾಡಿನಲ್ಲಿಯೂ ಎನ್​ಡಿಎ ಬೆಂಬಲದಿಂದ ಸರ್ಕಾರ‌ ರಚನೆ ಮಾಡುವ ವಿಶ್ವಾಸವಿದೆ ಎಂದು ಹೇಳಿದರು.ಇದನ್ನೂ ಓದಿ : ಪಂಚ ರಾಜ್ಯಗಳ ಫಲಿತಾಂಶದಿಂದ ನಮ್ಮಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ: ಡಿಸಿಎಂ ಡಿಕೆಶಿ

Category

🗞
News
Transcript
00:00tube
00:00Ihana
00:02Okay,
00:29which
00:33Thank you very much.
01:29Thank you very much.
01:40Thank you very much.
02:28Thank you very much.
02:29Thank you very much.
Comments

Recommended