ಮೈಸೂರು: ರೈತರ ಜೀವನ ಆಧಾರಸ್ತಂಭವಾದ ಫಲವತ್ತಾದ ಭೂಮಿ ಕಿತ್ತುಕೊಂಡು ಆ ಜಾಗದಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಗುಡುಮಾದನಹಳ್ಳಿ ರೈತ ಕುಟುಂಬದವರು ತಮ್ಮ ಗ್ರಾಮದಿಂದ ಜಾನುವಾರುಗಳೊಂದಿಗೆ ಪಾದಯಾತ್ರೆ ನಡೆಸಿ, ಜಿಲ್ಲಾ ಪಂಚಾಯಿತಿ ಕಚೇರಿಗೆ ಆಗಮಿಸಿ, ಅಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸ್ಥಳೀಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ವರುಣಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗುಡುಮಾಡನಹಳ್ಳಿ ಗ್ರಾಮದ ಫಲವತಾದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ ಮಾಡಿದೆ. ಇದಕ್ಕಾಗಿ ಈ ಪ್ರದೇಶದ 36 ಎಕರೆ ಹಸಿರು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಈ ಗ್ರಾಮದಲ್ಲಿರುವ 80 ಕುಟುಂಬಗಳು ಕಳೆದ 30 ವರ್ಷಗಳಿಂದ ಕೃಷಿ ಹೈನುಗಾರಿಕೆ ಹಾಗೂ ತರಕಾರಿ ಬೆಳೆದು ಜೀವನ ನಡೆಸುತ್ತಿವೆ. ಅದರಿಂದ ಈ ಸ್ಥಳದಲ್ಲಿ ಆಸ್ಪತ್ರೆ ನಿರ್ಮಾಣ ಬೇಡ ಎಂದು ಕಳೆದ 125 ದಿನದಿಂದ ಪ್ರತಿಭಟನೆ ನಡೆಸುತ್ತಿದೆ.ಈಗ ಇದನ್ನು ವಿರೋಧಿಸಿ ಗ್ರಾಮಸ್ಥರು ತಮ್ಮ ಗ್ರಾಮದಿಂದ ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಇರುವ ಸಿಎಂ ಸಿದ್ದರಾಮಯ್ಯ ಅವರ ಸ್ಥಳೀಯ ಕಚೇರಿವರೆಗೆ ಪಾದಯಾತ್ರೆ ನಡೆಸಿದರು.ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರು ತಮ್ಮ ಜೀವನದ ಆಧಾರವಾಗಿರುವ ಸ್ಥಳದಲ್ಲಿ ನಿಮ್ಹಾನ್ಸ್ ಆಸ್ಪತ್ರೆ ಬೇಡ, ಬೇರೆ ಕಡೆ ನಿರ್ಮಾಣ ಮಾಡಿ ಎಂದು ಆಗ್ರಹಿಸಿದರು. ರೈತರ ಪಾದಯಾತ್ರೆಗೆ ರೈತಸಂಘ, ಪರಿಸರಕ್ಕಾಗಿ ನಾವು ಸಂಘಟಣೆ ಹಾಗೂ ವಿವಿಧ ಸಂಸ್ಥ-ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿದರು.ಇದನ್ನೂ ನೋಡಿ: ರಾಜ್ಕೋಟ್: ಸಂಚಾರಕ್ಕೆ ಅಡ್ಡಿಯಾದ ದೇವಸ್ಥಾನಗಳ ತೆರವು, ಭಜನೆ ಮಾಡಿ ಸ್ಥಳೀಯರ ಪ್ರತಿಭಟನೆ
Comments