Skip to playerSkip to main content
  • 7 hours ago
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಶಿರಾಲಿ ಬಳಿಯ ವೇಂಕಟಾಪುರ ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ 14 ಜನರ ತಂಡದಲ್ಲಿ 8 ಮಂದಿ ಜಲಸಮಾಧಿಯಾಗಿದ್ದಾರೆ. ಮೂವರನ್ನು ರಕ್ಷಿಸಲಾಗಿದ್ದು, ಇಬ್ಬರ ಸ್ಥಿತಿ ಸ್ಥಿರವಾಗಿದ್ದು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಮೂವರ ಶೋಧ ಕಾರ್ಯ ಮುಂದುವರಿದಿದೆ. ಮೃತರೆಲ್ಲರೂ ಭಟ್ಕಳ ತಾಲೂಕಿನ ಶಿರಾಲಿ ಮೂಲದ ಬಡ ಮೀನುಗಾರ ಕುಟುಂಬಗಳಿಗೆ ಸೇರಿದವರು. ಹವಾಮಾನ ಇಲಾಖೆ ಮುಂದಿನ 48 ಗಂಟೆಗಳಲ್ಲಿ ಭಾರಿ ಗಾಳಿ-ಮಳೆ ಎಚ್ಚರಿಕೆ ನೀಡಿದ್ದರೂ ನಿರ್ಬಂಧ ಲೆಕ್ಕಿಸದೆ ನದಿಗಿಳಿದಿದ್ದು ದುರಂತಕ್ಕೆ ಕಾರಣವಾಗಿದೆ. ಮಾಜಿ ಶಾಸಕ ಸುನಿಲ್ ನಾಯಕ ಸ್ಥಳಕ್ಕೆ ಭೇಟಿ ನೀಡಿ ಸ್ಥಿತಿಗತಿ ಅವಲೋಕಿಸಿದ್ದಾರೆ.

Category

🗞
News
Comments

Recommended