Skip to playerSkip to main content
  • 7 hours ago
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ಭೀಕರ ದುರಂತ ಸಂಭವಿಸಿದೆ. ಶಿರಾಲಿ ಮೂಲದ 14 ಮಂದಿ ಕಪ್ಪೆ ಚಿಪ್ಪು ತೆಗೆಯಲು ನದಿಗೆ ಇಳಿದಿದ್ದರು. ಆರಂಭದಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದ ಕಾರಣ ಧೈರ್ಯದಿಂದ ಇಳಿದಿದ್ದರು. ಆದರೆ ಒಂದೇ ಕುಟುಂಬದ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೂವರನ್ನು ರಕ್ಷಿಸಲಾಗಿದ್ದು, ಮಾದೇವಿ ಮತ್ತು ನಾಗರತ್ನಾ ಅವರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಮೃತಪಟ್ಟ 8 ಮಂದಿಯಲ್ಲಿ ಹಲವು ಮಹಿಳೆಯರು ಮತ್ತು ಒಬ್ಬ ಪುರುಷ ಇದ್ದಾರೆ. ಉಳಿದವರ ಶೋಧ ಕಾರ್ಯ ಮುಂದುವರಿದಿದೆ.

Category

🗞
News
Comments

Recommended