Skip to playerSkip to main content
  • 8 hours ago
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ವೆಂಕಟಾಪುರ ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ 11 ಜನರು ಮೃತಪಟ್ಟ ದುರಂತ ಘಟನೆ. ಮೃತರಲ್ಲಿ 8 ಜನರು ಒಂದೇ ಕುಟುಂಬದ ಸದಸ್ಯರಾಗಿದ್ದು, 9 ಮಹಿಳೆಯರು ಮತ್ತು 2 ಪುರುಷರು ಸೇರಿದ್ದಾರೆ. ಭಟ್ಕಳದ ಶಾರದ ಹೊಳಿಯಲ್ಲಿ 11 ಜನರ ಸಾಮೂಹಿಕ ಅಂತ್ಯಕ್ರಿಯೆ ನೆರವೇರಿತು. ಮನೆಯಲ್ಲಿ ಅಳಲು ಕೂಡ ಯಾರೂ ಇಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ಇಡೀ ಪ್ರದೇಶದಲ್ಲಿ ಮೌನ ಆವರಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Category

🗞
News
Comments

Recommended