Skip to playerSkip to main content
  • 3 hours ago
ಸಂಜೆ ಸುರಿದ ಭಾರಿ ಮಳೆಯಿಂದ ಬೆಂಗಳೂರು ನಗರ ತತ್ತರಿಸಿದೆ. ವಿಜಯನಗರದಲ್ಲಿ ಕ್ಲಬ್ ಕಾಂಪೌಂಡ್ ಗೋಡೆ ಕುಸಿದು ಆಟೋದಲ್ಲಿದ್ದ 50 ವರ್ಷದ ಶಿವಬೋರಯ್ಯ ಎಂಬುವರು ಮೃತಪಟ್ಟಿದ್ದಾರೆ. ಗಂಟೆಗಟ್ಟಲೆ ಸುರಿದ ಮಳೆಯಿಂದ ನಗರದ ಬಹುತೇಕ ಪ್ರದೇಶಗಳಲ್ಲಿ ಜಲಾವೃತ ಉಂಟಾಗಿದ್ದು, ವಾಹನ ಸವಾರರು ತೊಂದರೆ ಅನುಭವಿಸಿದ್ದಾರೆ. ಇತ್ತೀಚೆಗೆ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಜೀವ ಹಾನಿಯಾದ ಘಟನೆಯನ್ನು ನೆನಪಿಸುವಂತೆ, ಮತ್ತೊಂದು ದುರ್ಘಟನೆ ನಡೆದಿದೆ. ಮಳೆ ನಿಂತ ಕೆಲವೇ ನಿಮಿಷಗಳಲ್ಲಿ ಕ್ಲಬ್ ಗೋಡೆ ಕುಸಿದ ಘಟನೆ ನಗರದ ಮೂಲಸೌಕರ್ಯ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

Category

🗞
News
Comments

Recommended