Skip to playerSkip to main content
  • 2 days ago
ಮೈಸೂರು: ಪ್ರಸಿದ್ಧ ಪುಣ್ಯಕ್ಷೇತ್ರ ದಕ್ಷಿಣಕಾಶಿ ನಂಜನಗೂಡಿನ ಕಪಿಲಾ ನದಿಯಲ್ಲಿ ಶ್ರೀಕಂಠೇಶ್ವರ ಸ್ವಾಮಿಯ ತೆಪ್ಪೋತ್ಸವ ಸಡಗರ, ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು. ವಜ್ರಾಭರಣ ಹಾಗೂ ಬಣ್ಣ ಬಣ್ಣದ ಹೂಗಳಿಂದ ವಿಶೇಷವಾಗಿ ಅಲಂಕೃತಗೊಂಡ ಶ್ರೀ ಪಾರ್ವತಿ ಸಮೇತವಾದ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಾಲಯದಿಂದ ತಂದು ಕಪಿಲಾ ನದಿಯ ಸ್ಥಾನಘಟ್ಟದ ಬಳಿ ಇರುವ ಮಂಟಪದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳ ವಾದ್ಯಗಳೊಂದಿಗೆ ಬಣ್ಣ ಬಣ್ಣದ ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದ ತೇಲುವ ದೇವಾಲಯದ ಮಾದರಿಯಲ್ಲಿದ್ದ ಯಾಂತ್ರಿಕ ದೋಣಿಯಲ್ಲಿ ಕೂರಿಸಿ ಅದ್ಧೂರಿಯಾಗಿ ತೆಪ್ಪೋತ್ಸವ ನಡೆಸಲಾಯಿತು. ಸಾವಿರಾರು ಭಕ್ತರ ಹರ್ಷೋದ್ಗಾರದೊಂದಿಗೆ ಶ್ರೀಕಂಠೇಶ್ವರ ಸ್ವಾಮಿಯವರ ತೆಪ್ಪೋತ್ಸವ ನದಿಯಲ್ಲಿ ಪೂರ್ವ ಪಶ್ಚಿಮಾಭಿಮುಖವಾಗಿ ಮೂರು ಬಾರಿ ಪ್ರದಕ್ಷಿಣೆ ಹಾಕಿತು. ಈ ಮನಮೋಹಕ ದೃಶ್ಯವನ್ನು ಭಕ್ತರು ಕಣ್ತುಂಬಿಕೊಂಡರು. ಇದೇ ಸಂದರ್ಭದಲ್ಲಿ ಕಪಿಲಾ ನದಿಯ ಮತ್ತೊಂದು ದಡದಲ್ಲಿ ಹೆಜ್ಜಿಗೆ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಜಮಾಯಿಸಿ ಚಿತ್ತಾಕರ್ಷಕವಾದ ಬಾಣ ಬಿರುಸು ಪಟಾಕಿಗಳನ್ನು ಸಿಡಿಸುವ ಮೂಲಕ ಸಂಭ್ರಮಿಸಿದರು.ಕಪಿಲಾ ನದಿ ತೀರ ಸೇರಿದಂತೆ ದೇವಾಲಯದ ಸುತ್ತಮುತ್ತ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಶ್ರೀಕಂಠೇಶ್ವರನ ತೆಪ್ಪೋತ್ಸವವನ್ನು ಕಣ್ತುಂಬಿಕೊಳ್ಳಲು ನಂಜನಗೂಡು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಭಕ್ತರ ಮಹಾಪೂರವೇ ಹರಿದುಬಂದಿತ್ತು. ದೇಗುಲದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್‌ ಅವರ ಮಾರ್ಗದರ್ಶನದಲ್ಲಿ ತೆಪ್ಪೋತ್ಸವದ ಎಲ್ಲಾ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು.ಇದನ್ನೂ ನೋಡಿ: ಹಂಪಿ: ವಿಜೃಂಭಣೆಯಿಂದ ನಡೆದ ವಿರೂಪಾಕ್ಷೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ

Category

🗞
News
Transcript
00:03foreign
00:10foreign
00:59Thank you very much.
Comments

Recommended