ಬೆಂಗಳೂರಿನ ಕೇರ್ ಸರ್ಕಲ್ ಬಳಿ ಎರಡು ಬಿಎಂಟಿಸಿ ಬಸ್ಗಳ ನಡುವೆ ತೀವ್ರ ಅಪಘಾತ ಸಂಭವಿಸಿದ್ದು, ಸಿಗ್ನಲ್ನಲ್ಲಿ ನಿಂತಿದ್ದ ವಾಯುವಜ್ರ ಬಸ್ಗೆ ಮತ್ತೊಂದು ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಒಬ್ಬ ಮಹಿಳೆಯ ಕಾಲು ಬಸ್ ಅಡಿಯಲ್ಲಿ ಸಿಲುಕಿ ಸುಮಾರು 2 ಗಂಟೆಗಳ ಕಾಲ ಒದ್ದಾಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ತಡವಾಗಿ ಆರಂಭವಾದ ಕಾರಣ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವಾರು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಹೃದಯ ಭಾಗದಲ್ಲಿ ಅಪಘಾತ ಸಂಭವಿಸಿದರೂ ರಕ್ಷಣಾ ತಂಡಗಳು ತಡವಾಗಿ ಬಂದಿದ್ದು ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸಿದೆ.
Comments