ಬೆಂಗಳೂರಿನ ಅನೇಕಲ್ ತಾಲುಕಿನ ಮರಸೂರು ಮಡಿವಾಳದಲ್ಲಿ ಒಂದು ದುರಂತ ಘಟನೆ ನಡೆದಿದೆ. ಸರ್ಕಾರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಿಕ್ಷಕಿಯಿಂದ ಬೈಗುಳ ಮತ್ತು ಸುಳ್ಳು ಆರೋಪಗಳನ್ನು ಹೊರಿಸಲಾಯಿತು ಎಂದು ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಾಲೆಯಲ್ಲಿ ಆದ ಅವಮಾನ ಸಹಿಸಲಾಗದು ಎಂದು ಡೆತ್ ನೋಟ್ನಲ್ಲಿ ಬರೆದಿಟ್ಟು, ತಾಯಿಯನ್ನು ಕ್ಷಮಿಸುವಂತೆ ಕೇಳಿಕೊಂಡಿದ್ದಾಳೆ. ಈ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶ ಮೂಡಿಸಿದ್ದು, ಶಿಕ್ಷಕಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗುತ್ತಿದೆ.
Comments