ದಕ್ಷಿಣ ಕನ್ನಡ ಜಿಲ್ಲೆಯ ಬಿಸಿ ರೋಡಿನಲ್ಲಿ ಲಾವಣ್ಯಾ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಚೇತನನನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಮಂಗಳೂರಿನ ವಾಮಂಜೂರು ಸಮೀಪ ಪಚ್ಚನಾಡಿಯಲ್ಲಿ ಪತ್ತೆ ಮಾಡಲಾಗಿದೆ. ಆರೋಪಿ ಇಲಿಪಾಶಾಣ ಸೇವಿಸಿ ಅಸ್ವಸ್ಥ ಸ್ಥಿತಿಯಲ್ಲಿದ್ದ. ಹತ್ಯೆ ಮಾಡಿದ ಬಳಿಕ ಆರೋಪಿ ಲಾವಣ್ಯಾಳ ತಂದೆಗೆ ಫೋನ್ ಮಾಡಿ 'ನಿಮ್ಮ ಮಗಳನ್ನು ಕೊಂದಿದ್ದೇನೆ, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ' ಎಂದು ತಿಳಿಸಿದ್ದ ಎಂದು ಪೊಲೀಸ್ ವರಿಷ್ಠ ಅಧಿಕಾರಿ ಮಾಹಿತಿ ನೀಡಿದ್ದಾರೆ.
Comments