ಚಿತ್ತದುರ್ಗ ನಗರದಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿದ್ದು, ಒಂದೇ ದಿನ ನಾಲ್ಕಕ್ಕೂ ಹೆಚ್ಚು ಮಕ್ಕಳಿಗೆ ನಾಯಿ ಕಚ್ಚಿದ ಘಟನೆ ವರದಿಯಾಗಿದೆ. ನಾಲ್ಕು ವರ್ಷದ ಬಾಲಕ ಗೋಪಾಲನ ತಲೆಗೆ ನಾಯಿ ಕಚ್ಚಿ ಗಾಯಗೊಳಿಸಿದ್ದು, ಅವನ ಸ್ಥಿತಿ ಚಿಂತಾಜನಕವಾಗಿದೆ. ಇದಕ್ಕೂ ಮೊದಲು ರಾಯಚೂರಿನಲ್ಲಿ ಒಂದೂವರೆ ವರ್ಷದ ಮಗು ನಾಯಿ ದಾಳಿಗೆ ಬಲಿಯಾಗಿತ್ತು. ಜಿಲ್ಲಾಡಳಿತ ಮತ್ತು ನಗರಸಭೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಸ್ಥಳೀಯ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
Comments