ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಸತ್ ಕಲಾಪದ ಮೂರನೇ ದಿನವೂ ವಿಪಕ್ಷಗಳ ಪ್ರತಿಭಟನೆ ಮುಂದುವರಿದಿದೆ. ನೀಟ್ ಅಕ್ರಮ ಮತ್ತು ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ವಿಷಯದಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸಂಸದರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಸದರು ಪ್ರಧಾನ ಮಂತ್ರಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಮತ್ತು ನೀಟ್ ಅಕ್ರಮ ತನಿಖೆಗೆ ಆಗ್ರಹಿಸಿ ಲೋಕಸಭೆ ಕಲಾಪ ಮುಂದೂಡಲ್ಪಟ್ಟಿದೆ. ಸ್ಪೀಕರ್ ಅವರು ಚರ್ಚೆಗೆ ಅವಕಾಶ ನೀಡಲು ಸಿದ್ಧರಿದ್ದರೂ, ವಿಪಕ್ಷ ಮತ್ತು ಸರ್ಕಾರದ ನಡುವೆ ಒಮ್ಮತ ಮೂಡದ ಕಾರಣ ಕಲಾಪ ಮತ್ತೆ ಮುಂದೂಡಲ್ಪಟ್ಟಿದೆ.
Comments