ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಸಂಕಷ್ಟದಲ್ಲಿ ಇರುವ ಸಮಯದಲ್ಲಿ ಬ್ಯಾಂಕ್ಗಳು ಸಾಲ ವಸೂಲಿಗಾಗಿ ನೋಟಿಸ್ ನೀಡುತ್ತಿರುವ ಘಟನೆ ಹಾವೇರಿ ಜಿಲ್ಲೆಯ ತಿಮ್ಮನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಜೂನ್ ತಿಂಗಳಿನಲ್ಲಿ ಮಳೆ ಕೊರತೆಯಿಂದಾಗಿ ಬೆಳೆ ಸರಿಯಾಗಿ ಬೆಳೆದಿಲ್ಲ. ಇಂತಹ ಸಂದರ್ಭದಲ್ಲಿ ಕೋರ್ಟ್, ಬ್ಯಾಂಕ್ ಮತ್ತು ವಕೀಲರ ಮೂಲಕ ನೋಟಿಸ್ ಕಳುಹಿಸಲಾಗುತ್ತಿದ್ದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘವು ಸರ್ಕಾರ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಮತ್ತು ಎಲ್ಲಾ ನೋಟಿಸ್ಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ.
Comments