ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ತಮಿಳುನಾಡು ಸರ್ಕಾರ ಕರ್ನಾಟಕದ ಜೊತೆ ಸಂಧಾನದ ಹೆಜ್ಜೆ ಇಟ್ಟಿದೆ. ಆಗಸ್ಟ 3ರಂದು ತಮಿಳುನಾಡು ಸಿಎಂ ವಿಜಯ್ ಬೆಂಗಳೂರಿಗೆ ಆಗಮಿಸಲಿದ್ದು, ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಕಾವೇರಿ ನೀರು ಹಂಚಿಕೆ ಕುರಿತು ಮಾತುಕತೆ ನಡೆಸಲಿದ್ದಾರೆ. ಮಳೆ ಕೊರತೆಯಿಂದ ನೀರು ಬಿಡಲು ತೊಂದರೆ ಇರುವ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆ ಬಗ್ಗೆಯೂ ಚರ್ಚೆ ನಡೆಯಲಿದೆ. ಸಂಘರ್ಷದ ಬದಲು ಸಂಧಾನವೇ ಸೂಕ್ತ ಎಂಬ ನಿಲುವನ್ನು ಡಿ.ಕೆ. ಶಿವಕುಮಾರ್ ಪ್ರತಿಪಾದಿಸುತ್ತಿದ್ದಾರೆ. ಸಂಘರ್ಷದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅರಿತ ತಮಿಳುನಾಡಿನ ನೂತನ ಸಿಎಂ ವಿಜಯ್ ಮೊದಲ ಸುತ್ತಿನ ಮಾತುಕತೆಗೆ ಮುಂದಾಗಿದ್ದಾರೆ.
Comments