ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮೋಸ್ಟ್ ವಾಂಟೆಡ್ ಆರೋಪಿ ಉಮರ್ ಫಾರೂಕ್ನನ್ನು ಎನ್ಐಎ ಕೊಚ್ಚಿಯಲ್ಲಿ ಬಂಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕಲ್ಲುಮುತ್ಲು ನಿವಾಸಿಯಾದ ಉಮರ್ ಫಾರೂಕ್, ನಿಷೇಧಿತ ಪಿಎಫ್ಐ ಸಭೆಯಲ್ಲಿ ಭಾಗವಹಿಸಿದ್ದ ಮತ್ತು ಹತ್ಯೆಯಲ್ಲಿ ಭಾಗಿಯಾದ ಆರೋಪಿಗೆ ಬೈಕ್ ಒದಗಿಸಿದ ಆರೋಪ ಹೊಂದಿದ್ದ. ಈ ಪ್ರಕರಣದಲ್ಲಿ ಆತನ ತಲೆಗೆ ಎನ್ಐಎ ನಾಲ್ಕು ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.
Comments