ಪಂಜಾಬ್ನ ಮಾಜಿ ಡಿಸಿಎಂ ಸುಖ್ಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್ನಲ್ಲಿ ದಾಳಿ ನಡೆದಿದೆ. ಮಾತಾ ಸಾಹಿಬ್ ಗುರುದ್ವಾರದಿಂದ ವಾಪಸಾಗುವ ವೇಳೆ ಅಜ್ಞಾತ ವ್ಯಕ್ತಿ ಏಕಾಏಕಿ ದಾಳಿ ಮಾಡಿದ್ದಾನೆ. ಸಣ್ಣ ಗಾಯದಿಂದ ಬಚಾವಾದ ಸುಖ್ಬೀರ್ ಸಿಂಗ್ ಬಾದಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿ ನಡೆಸಿದ ಆರೋಪಿ ಜಸ್ಪಾಲ್ ಸಿಂಗ್ನನ್ನು ಸ್ಥಳದಲ್ಲೇ ಪೊಲೀಸರು ಬಂಧಿಸಿದ್ದಾರೆ. ದಾಳಿಯ ಹಿಂದೆ ಅಕಾಲಿ ದಳ ಎನ್ಡಿಎ ಮೈತ್ರಿ ಕೂಟಕ್ಕೆ ವಾಪಸಾಗುವ ಸುಳಿವು ನೀಡಿದ್ದು ಕಾರಣ ಎಂದು ಹೇಳಲಾಗುತ್ತಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
Comments