Skip to playerSkip to main content
  • 1 day ago
ಚಾಮರಾಜನಗರ ಜಿಲ್ಲೆಯ ಕಾಡಿನಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಮೂವರು ಕಾಡುಗಳ್ಳರನ್ನು ಅರಣ್ಯ ಸಿಬ್ಬಂದಿ ಎನ್‌ಕೌಂಟರ್ ಮಾಡಿದ್ದಾರೆ. ಹನೂರು ತಾಲೂಕಿನ ತೋಮಿಯರ್ ಗ್ರಾಮದ ಅಂತೋನಿ, ಸ್ವಾಮಿ, ಪೀಟರ್ ಮತ್ತು ಕುಮಾರ್ ಗುಂಡೇಟಿಗೆ ಬಲಿಯಾಗಿದ್ದಾರೆ. ಕಾವೇರಿ ವನ್ಯಧಾಮದ ಬಳಿ ನಡೆದ ಈ ಘಟನೆಯ ನಂತರ ಸ್ಥಳೀಯರು ಮತ್ತು ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ಕಚೇರಿಗಳಿಗೆ ನುಗ್ಗಿ ಗಲಾಟೆ ಮಾಡಿ, ರಸ್ತೆ ತಡೆ ನಡೆಸಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಮೃತದೇಹಗಳನ್ನು ಮೈಸೂರಿನ ಕೇರ್ ಆಸ್ಪತ್ರೆಯ ಶವಾಗಾರಕ್ಕೆ ತರಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎನ್‌ಕೌಂಟರ್ ನಿಜವೇ ಅಥವಾ ನಕಲಿಯೇ ಎಂಬ ಅನುಮಾನಗಳು ಎದ್ದಿವೆ.

Category

🗞
News
Comments

Recommended