Skip to playerSkip to main content
  • 10 minutes ago
ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಅರವಳಿಕೆ ನೀಡದೆ ಶಸ್ತ್ರಚಿಕಿತ್ಸೆ ನಡೆಸಿದ ಆರೋಪದ ಪ್ರಕರಣ ಬೆಳಕಿಗೆ ಬಂದಿದೆ. 12 ಶ್ವಾನಗಳನ್ನು ರಕ್ಷಿಸಲಾಗಿದ್ದು, ಇಬ್ಬರು ವ್ಯಕ್ತಿಗಳ ವಿರುದ್ಧ ಬೆಳ್ಳಂದೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಪಶು ಪಾಲನ ಸಹಾಯಕ ನಿರ್ದೇಶಕ ಡಾ. ರುದ್ರೇಶ್ ಕುಮಾರ್ ದೂರು ನೀಡಿದ್ದಾರೆ. ಡಾ. ಮಂಜುನಾಥ್ ಬಿ.ಎಂ ಮತ್ತು ಅಸಿಫ್ ಪಾಶ ಎಂಬುವರು ಅರವಳಿಕೆ ನೀಡದೆ ನಾಯಿಗಳ ಕಾಲುಗಳ ಮೇಲೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ನಾಯಿಗಳು ನೋವಿನಿಂದ ನರಳಾಡಿದ್ದು ದಾಖಲಾಗಿದೆ. ಕಳೆದ ಮೂರು ವರ್ಷಗಳಿಂದ ಅಸಿಫ್ ಪಾಶ ಆಸ್ಪತ್ರೆ ನಡೆಸುತ್ತಿದ್ದಾರೆ. ಹೆಬ್ಬಾಳ ಪಶು ವೈದ್ಯಕೀಯ ಕಾಲೇಜಿನಲ್ಲಿ ಮಂಜುನಾಥ್ ಸಂಶೋಧನೆ ನಡೆಸುತ್ತಿದ್ದರು. ಪ್ರಾಥಮಿಕ ಪಶು ವೈದ್ಯ ಆಸ್ಪತ್ರೆಯಲ್ಲಿ ಮತ್ತೊಂದು ನಾಯಿ ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಧಿಕಾರಿಗಳ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

Category

🗞
News
Comments

Recommended